ಕಾಶ್ಮೀರದ ಪಹಲ್ ಗ್ರಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದರ ಬಗ್ಗೆ ರಾಜ್ಯ ಸರ್ಕಾರವು ವಿಷಾದ ವ್ಯಕ್ತಪಡಿಸಿದೆ. ಆದ್ದರಿಂದ ಜಮ್ಮು ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರ ವಿಶೇಷ ವ್ಯವಸ್ಥೆಗಳನ್ನು ರೂಪಿಸುತ್ತಿದೆ.
ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು ತಮ್ಮ ಮೂಲಕ ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ನೀಡಲು ವಿನಂತಿಸಿಕೊಂಡಿದೆ.
ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು 08043344334, 08043344335, 08043344336, 08043344342 ಈ ಸಹಾಯವಾಣಿಗೆ ನೀಡಬೇಕೆಂದು ಕೋರಿದೆ.


